ಪೀಠಾಧಿಪತಿ ಘನತೆ, ಗೌರವಕ್ಕೆ ಧಕ್ಕೆ ಆರೋಪ: ಮುರುಘಾ ಮಠದ ಆಡಳಿತಾಧಿಕಾರಿ ಹುದ್ದೆಯಿಂದ ಬಸವರಾಜನ್ ವಜಾ
ಚಿತ್ರದುರ್ಗ: ಷರತ್ತುಗಳನ್ನು ಉಲ್ಲಂಘಿಸಿ ಮಠ ಹಾಗೂ ಪೀಠಾಧಿಪತಿ ಘನತೆ, ಗೌರವಕ್ಕೆ ಧಕ್ಕೆ ತರಲು ಒಳಸಂಚು ರೂಪಿಸಿದ ಆರೋಪದ ಮೇರೆಗೆ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಅವರನ್ನು ಮುರುಘಾ ಮಠದ ಆಡಳಿತಾಧಿಕಾರಿ ಮತ್ತು ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಲಾಗಿದೆ.
ಮಾರ್ಚ್ 7ರಂದು ಅವರು ಈ ಹುದ್ದೆಗೆ ನೇಮಕಗೊಂಡಿದ್ದರು. ಈ ವೇಳೆ ಬಸವರಾಜನ್ ಅವರಿಗೆ 8ಕ್ಕೂ ಹೆಚ್ಚು ಷರತ್ತುಗಳನ್ನು ವಿಧಿಸಲಾಗಿತ್ತು. 2007ರಲ್ಲಿಯೂ ಇವರನ್ನು ಇದೇ ಹುದ್ದೆಯಿಂದ ಕಿತ್ತುಹಾಕಲಾಗಿತ್ತು.




