April 27, 2025

ಕಾರ್ಕಳ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

0

ಕಾರ್ಕಳ: ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ತಮ್ಮ ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾರ್ಕಳ ತಾಲೂಕಿನ ನೀರೆ ಗ್ರಾಮದ ನೀರೆಜೆಡ್ಡು ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ನೀರೆಯ ಜೆಡ್ಡು ನಿವಾಸಿ ಆನಂದ ಶೆಟ್ಟಿ(45) ಆತ್ಮಹತ್ಯೆಗೈದವರು. ವೃತ್ತಿಯಲ್ಲಿ ಟೆಂಪೋ ಚಾಲಕರಾಗಿದ್ದರು. ಸಾಕಷ್ಟು ಸ್ಥಿತಿವಂತರಾಗಿದರು. ಶನಿವಾರದಂದು ಪತ್ನಿ ತವರು ಮನೆಗೆ ಹೋಗಿದ್ದಾಗ ಆನಂದ ಶೆಟ್ಟಿ ತನ್ನ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!