ಪಡುಬಿದ್ರಿ: ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ತೀರಿಸದೆ ಪತ್ನಿಯನ್ನೇ ಕೊಲೆ ಮಾಡಿದ ಪತಿ
ಪಡುಬಿದ್ರಿ: ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಬಳಿಕ ಪತ್ನಿಯ ಹೆಸರಿನಲ್ಲಿ ಸಾಲ ಮಾಡಿ ತೀರಿಸದೆ ಅದರಿಂದ ಪಾರಾಗಲು ಹೆಂಡತಿಯೊಂದಿಗೆ ಆತ್ಮಹತ್ಯೆ ನಾಟಕವಾಡಿ ಕೊಲೆ ಮಾಡಿರುವುದಾಗಿ ಪತಿ ಹಾಗೂ ಆತನ ಮನೆಯವರ ವಿರುದ್ಧ ಮೃತ ಮಹಿಳೆಯ ಅಕ್ಕ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪೈಯಾರ್ ರಸ್ತೆ ನಿವಾಸಿ ವಿದ್ಯಾ(29) ಮೃತರು ಎಂದು ಗುರುತಿಸಲಾಗಿದೆ. ವಿದ್ಯಾ ಅವರು ಬಡಾ ಗ್ರಾಮದ ಮುಳ್ಳುಗುಡ್ಡೆ ನಿವಾಸಿ ಯತಿನ್ ರಾಜ್ ಎಂಬಾತನನ್ನು ಪ್ರೀತಿಸಿ 2017 ರ ಫೆ .28 ರಂದು ವಿವಾಹವಾಗಿದ್ದರು.
ಗಂಡನ ಮನೆಯಲ್ಲಿ ಯತಿನ್ ರಾಜ್, ಮಾವ ರಾಘು, ಅತ್ತೆ ಗೀತಾ ಮತ್ತು ಮೈದುನ ಯಕ್ಷಿತ್ ಎಂಬವರು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಹಾಗೂ ಯತಿನ್ ರಾಜ್ ನು ಸರಿಯಾಗಿ ಕೆಲಸ ಮಾಡದೇ ವಿದ್ಯಾಳಿಂದ ಹಲವು ಬ್ಯಾಂಕ್, ಸೊಸೈಟಿ ಸಂಘ, ಸಂಸ್ಥೆಗಳಿಂದ ಸಾಲ ತೆಗೆಸಿ ಅದನ್ನು ಖರ್ಚು ಮಾಡುತ್ತಿದ್ದ ಎಂದು ದೂರಲಾಗಿದೆ.




