ಸೆ.18ರಂದು ಬೋಳಂತೂರಿನಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ವಿಟ್ಲ: ಅಕ್ಷಯ ಚಾರಿಟೇಬಲ್ ಟ್ರಸ್ಟ್ ದಕ್ಷಿಣ ಕನ್ನಡ ಹಾಗೂ ಇಂಡಿಯನ್ ಆಸ್ಪತ್ರೆ ಮಂಗಳೂರು ಇದರ ವತಿಯಿಂದ ಮಾಜಿ ಸಚಿವ ಬಿ. ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಸೆ.18 ರ ಭಾನುವಾರ ಬೋಳಂತೂರು ಸರಕಾರಿ ಶಾಲೆಯಲ್ಲಿ ನಡೆಯಲಿದೆ.
ಅಸ್ಸಯ್ಯಿದ್ ಮದಕ ತಂಙಳ್, ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಸಾಲೆತ್ತೂರು ಧರ್ಮಗುರು ಹೆನ್ರಿ ಡಿ ಸೋಜ, ಮಾಜಿ ಸಚಿವ ಬಿ. ರಮಾನಾಥ ರೈ, ಅಶ್ಅರಿಯ್ಯದ ಮಹಮ್ಮದಾಲಿ ಸಖಾಫಿ ಮೊದಲಾದವರು ಭಾಗವಹಿಸಲಿದ್ದಾರೆ.



