ಕುಂದಾಪುರ: ಪೈಲೆಟ್ ವೇಲ್ ಮೀನು ತ್ರಾಸಿ-ಮರವಂತೆ ಕಡಲತೀರದಲ್ಲಿ ಪತ್ತೆ
ಕುಂದಾಪುರ : ಕೆಲವು ದಿನಗಳ ಹಿಂದೆ ಸತ್ತ ಅಪೂರ್ವ ಪೈಲೆಟ್ ವೇಲ್ನ ಕಳೇಬರವು ಹೆದ್ದಾರಿ ಬದಿಯ ತ್ರಾಸಿ-ಮರವಂತೆ ಕಡಲತೀರದಲ್ಲಿ ಪತ್ತೆಯಾಗಿದೆ.
ಬುಧವಾರ ಬೆಳಗ್ಗಿನಿಂದಲೇ ಕೊಳೆತು ನಾರುತ್ತಿದ್ದರೂ ಸಂಬಂಧಪಟ್ಟ ಪ್ರವಾಸೋದ್ಯಮ ಅಥವಾ ಮೀನುಗಾರಿಕೆ ಇಲಾಖೆಯವರು ಈ ಬಗ್ಗೆ ನಿರ್ಲಕ್ಷ್ಯ ತೋರಿದ್ದರಿಂದ ಸ್ಥಳೀಯರೇ ಸೇರಿ ಕಡಲ ಕಿನಾರೆಯಲ್ಲಿ ಹೂತಿದ್ದರು.
ಮಂಗಳವಾರ ತಡರಾತ್ರಿ ಸುಮಾರು 500 ಕೆ.ಜಿ. ತೂಕದ ಪೈಲೆಟ್ ವೇಲ್ ಶವ ತ್ರಾಸಿ – ಮರವಂತೆ ಬೀಚಿನ ದಡಕ್ಕೆ ತೇಲಿ ಬಂದಿತ್ತು. ಈ ಮೀನಿನ ಕಳೇಬರವನ್ನು ಅರಣ್ಯ ಅಧಿಕಾರಿಗಳು ಹಾಗೂ ಮಂಗಳೂರಿನ ರೀಫ್ವಾಚ್ ಮರೈನ್ ಕನ್ಸರ್ವೇಶನ್ ಸಂಸ್ಥೆಯ ಅಧಿಕಾರಿಗಳು ಪರಿಶೀಲಿಸಿದ್ದು, ಅಪರೂಪದ ಪೈಲೆಟ್ ವೇಲ್ ಎನ್ನುವ ತಿಮಿಂಗಿಲದ ಪ್ರಭೇದ ಎಂದು ತಿಳಿಸಿದ್ದಾರೆ.




