December 19, 2025

ಕುದ್ರೋಳಿ: ನಿಶ್ಚಿತಾರ್ಥವಾಗಬೇಕಾಗಿದ್ದ ಯುವತಿಗೆ ಅಶ್ಲೀಲ ಸಂದೇಶ:
ಯುವಕನ ಬಂಧನ

0
Screenshot_2021-11-09-10-29-42-80_680d03679600f7af0b4c700c6b270fe7.jpg

ಮಂಗಳೂರು: ತಾನು ನಿಶ್ಚಿತಾರ್ಥವಾಗಬೇಕಾಗಿದ್ದ ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಯುವತಿ ನೀಡಿದ ದೂರಿನ ಆಧಾರದಲ್ಲಿ ಯುವಕನೋರ್ವನನ್ನು ಬಂಧಿಸಲಾಗಿದೆ.

ಬಂಧಿತನನ್ನು ಕುದ್ರೋಳಿ ಆಳಕೆ ನಿವಾಸಿ ಶ್ರೀನಿವಾಸ ಭಟ್ (35) ಎಂದು ಗುರುತಿಸಲಾಗಿದೆ. ಆರೋಪಿ ನಗರದ ಯುವತಿಯೊಬ್ಬಳ ಜೊತೆ ಮದುವೆಗೆ ಮಾತುಕತೆ ನಡೆದಿತ್ತು. ಎರಡೂ ಕುಟುಂಬಗಳು ಮದುವೆಗೆ ಒಪ್ಪಿಗೆ ಸೂಚಿಸಿದ್ದು, ಇದರ ಪ್ರಕ್ರಿಯೆ ನಡೆಯುತ್ತಿತ್ತು.

ಕೆಲ ದಿನಗಳ ಬಳಿಕ ಯುವತಿಯ ನಂಬರ್ ಪಡೆದುಕೊಂಡ ಶ್ರೀನಿವಾಸ್ ಮದುವೆಯಾಗಲಿದ್ದ ಯುವತಿಯ ಮೊಬೈಲ್ ನಂಬರ್ ಪಡೆದು ಅಶ್ಲೀಲ, ವಿಚಿತ್ರ ಸಂದೇಶ ಹಾಕುತ್ತಿದ್ದ. ಹಲವಾರು ಬಾರಿ ಅನಪೇಕ್ಷಿತ ಮೇಸೆಜ್ ಗಳನ್ನು ರವಾನಿಸುತ್ತಿದ್ದ ಇದು ಯುವತಿಗೆ ತೀರಾ ಇರಿಸು ಮುರಿಸು ಉಂಟು ಮಾಡುತ್ತಿತ್ತು.

ಈ ವಿಚಾರವನ್ನು ಯುವತಿ ಮನೆಯವರ ಗಮನಕ್ಕೆ ತಂದಿದ್ದು, ಕೂಡಲೇ ಕುಟುಂಬಸ್ಥರು ನಿಶ್ಚಿತಾರ್ಥ ಮುಂದೂಡಿದ್ದರು ಎನ್ನಲಾಗಿದೆ. ಇದರ ಬಳಿಕವೂ ಶ್ರೀನಿವಾಸ್ ಸಲಿಂಗ ಕಾಮಕ್ಕೆ ಸಂಬಂಧಿಸಿದ ಅಶ್ಲೀಲ ಸಂದೇಶವನ್ನು ಕಳುಹಿಸುತ್ತಿದ್ದು, ಈ ವರ್ತನೆಯಿಂದ ಮತ್ತಷ್ಟು ನೊಂದುಕೊಂಡ ಯುವತಿ ನಗರದ ಸೈಬರ್ ಠಾಣೆಗೆ ಯುವಕನ ವಿರುದ್ಧ ಮಾನಸಿಕ ಕಿರುಕುಳ ನೀಡುತ್ತಿರುವ ಬಗ್ಗೆ ಸೈಬರ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!