PFI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ಸೇರಿದಂತೆ ಮೂವರನ್ನು ಪೊಲೀಸರು ಬಂಧನ
ಬಂಟ್ವಾಳ, ಸೆ.27: ಎನ್.ಐ.ಎ. ದಾಳಿ ಬಳಿಕ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಿ.ಎಫ್.ಐ.(PFI) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಮುಂಜಾನೆ ಈ ಮೂವರ ಮನೆಗೆ ದಾಳಿ ಮಾಡಿದ ಪೊಲೀಸರು ಪಿ.ಎಫ್.ಐ. ದ.ಕ. ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್, ಮುಖಂಡರಾದ ಫಿರೋಝ್ ಖಾನ್ ಗೂಡಿನಬಳಿ, ರಾಝಿಕ್ ಗೂಡಿನಬಳಿ ಎಂಬವರನ್ನು ವಶಕ್ಕೆ ಪಡೆದು ಬಳಿಕ ತಹಶೀಲ್ದಾರ್ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.




