ಚಿಕ್ಕಮಗಳೂರು: RSS ಮುಖಂಡನ ಕಾರಿನ ಮೇಲೆ ಕೊಲೆ ಬೆದರಿಕೆಯ ಬರಹ
ಚಿಕ್ಕಮಗಳೂರು: ಆರ್ ಎಸ್ ಎಸ್ ಮುಖಂಡನ ಕಾರಿನ ಮೇಲೆ ಕಿಲ್ ಯೂ ಬರಹವನ್ನು ಕಿಡಿಗೇಡಿಗಳು ಬರೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಪಟ್ಟಣದಲ್ಲಿರುವ ಲಕ್ಷ್ಮೀಶನಗರದಲ್ಲಿ ಜಿಲ್ಲಾ ಸಂಯೋಜಕ ಡಾ.ಶಶಿಧರ್ ಅವರ ಕಾರಿನ ಮೇಲೆ ಈ ಬರಹ ಬರೆಯಲಾಗಿದೆ.
ಡಾ. ಶಶಿಧರ್ ಅವರು ತಮ್ಮ ಮನೆಯ ಮುಂದೆ ಕಾರು ನಿಲ್ಲಿಸಿದ್ದಾಗ ಕಿಡಿಗೇಡಿಗಳು ಕಾರಿನ ನಾಲ್ಕೂ ಚಕ್ರಗಳ ಗಾಳಿಯನ್ನು ತೆಗೆದು ‘ಕಿಲ್ ಯೂ’ ಎಂದು ಬರೆದಿದ್ದಾರೆ. ಸ್ಥಳಕ್ಕೆ ಕಡೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.




