February 2, 2026

ನಿಂತಿದ್ದ ಲಾರಿಗೆ ಕಾರು ಢಿಕ್ಕಿ: ಕಾರಿನಲ್ಲಿದ್ದ ಯುವಕ ಮೃತ್ಯು

0
image_editor_output_image-800861324-1664259720938.jpg

ಬೆಂಗಳೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಯುವಕ ಮೃತಪಟ್ಟ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ದೀಪಕ್ (26) ಸಾವನ್ನಪ್ಪಿದ ಯುವಕ. ಬೆಂಗಳೂರಿನ ನೈಸ್ ರೋಡ್‍ನಲ್ಲಿ ಸೋಮವಾರ ಈ ಘಟನೆ ನಡೆದಿತ್ತು. ಅಪಘಾತದಲ್ಲಿ ದೀಪಕ್ ಮೆದುಳು ನಿಷ್ಕ್ರಿಯವಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾನೆ.

ಘಟನೆಗೆ ಸಂಬಂಧಿಸಿ ದೀಪಕ್‌ ಕುಟುಂಬಸ್ಥರು ಮೃತನ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್‌ಆರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಲು ಸಿದ್ಧತೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!