March 24, 2026

ಖಾಸಗಿ ಬಸ್, ಟ್ರಕ್ ನಡುವೆ ಢಿಕ್ಕಿ: 8 ಮಂದಿ ಸ್ಥಳದಲ್ಲೇ ಮೃತ್ಯು

0
image_editor_output_image1331718358-1664342683112.jpg

ಲಖನೌ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿ‌ದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಲಖೀಂಪುರ ಖೇರಿ ಎಡಿಎಂ ಸಂಜಯ್ ಕುಮಾರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿದ್ದಾರೆ. ಜತೆಗೆ, ತಕ್ಷಣ ನೆರವಿಗೆ ಧಾವಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!