ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಜಾನುವಾರುಗಳು ಢಿಕ್ಕಿಯಾಗಿ ಹಾನಿ ಪ್ರಕರಣ: ಎಮ್ಮೆಗಳ ಮಾಲಕನ ವಿರುದ್ಧ FIR ದಾಖಲು
ಗಾಂಧಿನಗರ: ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಗುರುವಾರ ಜಾನುವಾರುಗಳು ಡಿಕ್ಕಿ ಹೊಡೆದ ಪರಿಣಾಮ ರೈಲಿಗೆ ಹಾನಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಮ್ಮೆಗಳ ಮಾಲೀಕನ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ. ಹೀಗಾಗಿ ಎಮ್ಮೆಗಳ ಮಾಲೀಕರ ವಿರುದ್ಧ ಗುಜರಾತ್ನ ರೈಲ್ವೆ ರಕ್ಷಣಾ ಪಡೆ (RPF) ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.




