September 20, 2024

ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಜೀವಬೆದರಿಕೆ ಪ್ರಕರಣ: ಓರ್ವ ಬಂಧನ

0

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಪೋಲೀಸರು ಬಂಧಿಸಿದ್ದಾರೆ.

ಮಂಗಳೂರು ಪಲ್ನೀರು ನಿವಾಸಿ ರಿಯಾಝ್ ಎಂಬಾತ ಬಂಧಿತ ಆರೋಪಿ.

ಗುರುವಾರ ರಾತ್ರಿ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿ ದ ಬಂಟ್ವಾಳ ಪೋಲೀಸರು ಆರೋಪಿ ಚಾಲಕ ಹಾಗೂ ಸ್ಕಾರ್ಫಿಯೋ ವಾಹನವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ಕುರಿತು ವಿವರಿಸಿದ ಅವರು ಆರೋಪಿ ವಿರುದ್ದ ಈ ವರೆಗೆ ಯಾವುದೇ ಕ್ರಿಮಿನಲ್ ಪ್ರಕರಣ ಗಳು ದಾಖಲಾಗಿಲ್ಲ.
ಹಾಗೂ ವಾಹನದಲ್ಲಿ ಯಾವುದೇ ಮಾರಕಾಯುಧಗಳು ಪತ್ತೆಯಾಗಿಲ್ಲ ಎಂದು ಅವರು ತಿಳಿಸಿದರು.
ಪ್ರಾಥಮಿಕ ತನಿಖೆಯಲ್ಲಿ ವಾಹನ ಓವರ್ ಟೇಕ್ ಮಾಡುವ ಭರದಲ್ಲಿ ಘಟನೆ ನಡೆದಿರುವ ಸಾಧ್ಯತೆ ಬಗ್ಗೆ ಅವರು ಸಂಶಯ ವ್ಯಕ್ತಪಡಿಸಿದ್ದು, ಪೂರ್ಣ ತನಿಖೆಯ ಬಳಿಕ ಹೆಚ್ಚಿನ ವಿವರಗಳನ್ನು ತಿಳಿಸಲಾಗುತ್ತದೆ ಎಂದು ಅವರು ಹೇಳಿದರು.

ಎಡಿಷನಲ್ ಎಸ್.ಪಿ.ಕುಮಾರ್ ಚಂದ್ರ, ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಸ್‌ಐ.ಹರೀಶ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!