February 2, 2026

ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಸಿಡಿಲು ಬಡಿದು ಸ್ಥಳದಲ್ಲೇ ಸಾವು

0
image_editor_output_image563535301-1666159722314.jpg

ಧಾರವಾಡ: ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಪಶುಪತಿಹಾಳ ನಿವಾಸಿ ಪ್ರವೀಣ್ ಬಡಿಗೇರ (32) ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿಯ ಖಾಸಗಿ ಟ್ರಾನ್ಸ್ ಪೋರ್ಟ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಕೆಲಸ ಮುಗಿಸಿ ವಾಪಸ್ ಮನೆಗೆ ತೆರಳುತ್ತಿರುವಾಗ ಸಂಶಿ ಮತ್ತು ಪಶುಪತಿಹಾಳ ಮಾರ್ಗಮಧ್ಯೆ ಈ ಅವಘಡ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!