ಮೆಹಬೂಬಾ ಮುಫ್ತಿಗೆ ಮತ್ತೊಂದು ಶಾಕ್ -ಸರ್ಕಾರಿ ಬಂಗಲೆ ತೊರೆಯುವಂತೆ ಕೇಂದ್ರ ನೋಟಿಸ್
ಕಾಶ್ಮೀರದ ಫೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಸರ್ಕಾರಿ ಬಂಗಲೆ ತೊರೆಯುವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ.
ಶ್ರೀನಗರದಲ್ಲಿರುವ ಫೇರ್ವ್ಯೂ ಸಕಾಧರಿ ಬಂಗಲೆಯಲ್ಲಿ ವಾಸವಾಗಿರುವ ಮುಫ್ತಿ ಅವರಿಗೆ ಬಂಗಲೆ ತೊರೆಯುವಂತೆ ನೋಟಿಸ್ ನೀಡಲಾಗಿದ್ದು, ಇದನ್ನು ಮುಫ್ತಿ ಅವರೇ ಸ್ಪಷ್ಟಪಡಿಸಿದ್ದಾರೆ.

ಇನ್ನು ಕೇಂದ್ರ ಸರ್ಕಾರವನ್ನು ಹಲವಾರು ಬಾರಿ ಮುಫ್ತಿ ಟೀಕಿಸಿದ್ದು, ಇದೇ ಕಾರಣಕ್ಕೆ ಸರ್ಕಾರಿ ಬಂಗಲೆ ತೊರೆಯುವಂತೆ ಅವರಿಗೆ ನೋಟಿಸ್ ನೀಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.




