ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ -ಕಾಸರಗೋಡು ಮೂಲದ ಸೇನಾ ಸಿಬ್ಬಂದಿ ಸಾವು
ಅರುಣಾಚಲ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೃತಪಟ್ಟವರಲ್ಲಿ ಕಾಸರಗೋಡಿನ ಸೈನಿಕ ಒಳಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚೆರ್ವತ್ತೂರು ಕಾಟುವಳಪ್ಪಿನ ಕೆ . ವಿ ಅಶ್ವಿನ್ (24) ಮೃತಪಟ್ಟವರು.
ನಾಲ್ಕು ವರ್ಷದ ಹಿಂದೆ ಇಲೆಕ್ಟ್ರಾನಿಕ್ ಆಂಡ್ ಮೆಕಾನಿಕಲ್ ವಿಭಾಗದ ಇಂಜಿನಿಯರ್ ಆಗಿ ಅಶ್ವಿನ್ ಸೇನಾಪಡೆಗೆ ಸೇರ್ಪಡೆಗೊಂಡಿದ್ದರು ಎನ್ನಲಾಗಿದೆ.
ಇನ್ನು ದುರಂತದ ಬಗ್ಗೆ ಸೇನಾ ಅಧಿಕಾರಿಯೋರ್ವರು ಅಶ್ವಿನ್ ರವರ ಮನೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.





