ಕಾಸರಗೋಡು: ಇಬ್ಬರು ಹೊರ ರಾಜ್ಯ ಕಾರ್ಮಿಕರ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ
ಇಬ್ಬರು ಹೊರ ರಾಜ್ಯ ಕಾರ್ಮಿಕರು ಮೃತಪಟ್ಟ ಸ್ಥಿತಿಯಲ್ಲಿ ಬೇಕಲ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಮಧ್ಯಪ್ರದೇಶ ಮೂಲದ ಅಭಿಮನ್ಯು ಸಿಂಗ್ ( 24) ಮತ್ತು ರವಿ ಸಿಂಗ್ (25) ಎಂದು ಗುರುತಿಸಲಾಗಿದೆ.
ಭಾನುವಾರ ಸಂಜೆ ಸ್ನೇಹಿತರ ಜೊತೆ ಬೇಕಲ ಬೀಚ್ ಗೆ ಬಂದಿದ್ದು, ಜೊತೆಗಿದ್ದವರು ಮರಳಿದರೂ ಇಬ್ಬರು ನಾಪತ್ತೆಯಾಗಿದ್ದರು. ಇದರಿಂದ ಇಂದು ಬೆಳಿಗ್ಗೆಯಿಂದ ಶೋಧ ನಡೆಸಿದ್ದು, ಬೀಚ್ ಪರಿಸರದ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ.





