December 16, 2025

ವೇಣೂರು: ಅನಾರೋಗ್ಯದಿಂದ ಪಿಯುಸಿ ವಿದ್ಯಾರ್ಥಿನಿ ಮೃತ್ಯು

0
image_editor_output_image856951196-1666851065222.jpg

ವೇಣೂರು: ಗುಂಡೂರಿ ಗ್ರಾಮದ ಅಶೋಕ ನಿವಾಸ ನಿವಾಸಿ, ವೇಣೂರು ಸ.ಪ.ಪೂ. ಕಾಲೇಜು ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು| ಅಂಕಿತಾ (17) ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ. 26ರಂದು ನಿಧನ ಹೊಂದಿದ್ದಾರೆ.

ಅಶೋಕ ಪೂಜಾರಿ ಮತ್ತು ಪ್ರತಿಮಾ ದಂಪತಿಯ ಪುತ್ರಿಯಾಗಿರುವ ಈಕೆ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ರೋಗ ವಾಸಿಯಾಗದೇ ಇದ್ದು, ಅ. 22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿ ಅಲ್ಲಿ ಚಿಕಿತ್ಸೆ ಮುಂದುವರಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಂಕಿತಾ ಇಹಲೋಕ ತ್ಯಜಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!