ಮಂಗಳೂರು: ಸುರತ್ಕಲ್ ಟೋಲ್ಗೇಟ್ ಪ್ರತಿಭಟನೆ ಮುಂದೂಡುವಂತೆ ಜಿಲ್ಲಾಧಿಕಾರಿ ಮನವಿ
ಸುರತ್ಕಲ್ ಟೋಲ್ಗೇಟ್ ತೆರವಿಗೆ ಸಂಬಂಧಿಸಿದಂತೆ ಸರಕಾರವು ಅಧಿಕೃತವಾಗಿ ಗೆಜೆಟ್ ನೋಟಿಫಿಕೇಶನ್ ಹೊರಡಿಸುವವರೆಗೂ ಪ್ರತಿಭಟನೆಯನ್ನು ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕುಮಾರ್ ಮನವಿ ಮಾಡಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರವು ಗೆಜೆಟ್ ನೋಟಿಫಿಕೇಶನ್ ಹೊರಡಿಸುವವರೆಗೂ ಟೋಲ್ಗೇಟ್ ತೆರವಿಗಾಗಿ ರಚಿಸಲಾದ ಹೋರಾಟ ಸಮಿತಿಯವರು ತಾಳ್ಮೆ ವಹಿಸಬೇಕು ಎಂದರು.
ಇನ್ನು ಸಮಿತಿಯ ಮುಖಂಡರು ಟೋಲ್ಗೇಟ್ ಇರುವ ಹೆದ್ದಾರಿ ವ್ಯಾಪ್ತಿಯಲ್ಲಿ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು, ತಪ್ಪಿದ್ದಲ್ಲೀ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ವೇಳೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್, ಸಹಾಯಕ ಆಯುಕ್ತರಾದ ಮದನ್ ಮೋಹನ್, ಗಿರೀಶ್ ನಂದನ್ ಮತ್ತಿತರರು ಉಪಸ್ಥಿತರಿದ್ದರು.






