September 20, 2024

ಕಾಣಿಯೂರು ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ನಾಳೆ ಪುತ್ತೂರಿನಲ್ಲಿ ಪ್ರತಿಭಟನೆ

0

ಪುತ್ತೂರು: ಕಾಣಿಯೂರಿನಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಗುಂಪು ಹಲ್ಲೆ ಖಂಡಿಸಿ ನಾಳೆ ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಯುವಜನ ಪರಿಷತ್ ಬೃಹತ್ ಜಾಥಾ ಹಾಗೂ ಪ್ರತಿಭಟನೆ ನಡೆಯಲಿದೆ.

ಈ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗವಹಿಸುವ ಸಾಧ್ಯತೆ ಇದೆ. ರಾಜಕೀಯ, ಸಾಮಾಜಿಕ, ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿದೆ.

ಮೂರು ಗಂಟೆಗೆ ದರ್ಬೆ ಜಂಕ್ಷನ್ ನಿಂದ ಪುತ್ತೂರು ಎಸಿ ಕಚೇರಿವರೆಗೆ ಬೃಹತ್‌ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಗುಂಪು ಹಲ್ಲೆ ನಡೆಸಿ ಭೀತಿ ಸೃಷ್ಟಿಸಿದ ದುಷ್ಕರ್ಮಿಗಳ‌ ವಿರುದ್ಧ ಕಠಿಣ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸುವಂತೆ ಈ ವೇಳೆ ಪ್ರತಿಭಟನಾಕಾರರು ಆಗ್ರಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!