ಕೆಎಸ್ಆರ್ಟಿಸಿ ಬಸ್, ಲಾರಿ ಮುಖಾಮುಖಿ ಢಿಕ್ಕಿ: ಲಾರಿ ಚಾಲಕ ಸ್ಥಳದಲ್ಲಿಯೇ ಮೃತ್ಯು
ಶಹಾಪುರ: ಕೆ.ಎಸ್. ಆರ್.ಟಿ.ಸಿ. ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಸಮೀಪ ಹೆದ್ದಾರಿಯಲ್ಲಿ ನಿನ್ನೆ(ಅ.30) ರಾತ್ರಿ ನಡೆದಿದೆ.
ಬಸ್ ಚಾಲಕ ಸೇರಿದಂತೆ ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟಗಾಯಗಳಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





