September 8, 2024

ಉಳ್ಳಾಲ: ಮನೆಯಿಂದ ಚಿನ್ನಾಭರಣ ಕಳವು ಪ್ರಕರಣ – ಮಹಿಳೆ ಅರೆಸ್ಟ್

0

ಉಳ್ಳಾಲ: ಕುತ್ತಾರ್‌ನಲ್ಲಿರುವ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನಿವಾಸಿ ಸರೋಜಾದೇವಿ ಎಂದು ಗುರುತಿಸಲಾಗಿದೆ.

ರಮೇಶ್ ಅವರ ಮನೆಯಿಂದ ಚಿನ್ನಾಭರಣ ಕಳವಾಗಿದ್ದು, ಮನೆ ಕೆಲಸಕ್ಕಿದ್ದ ಸರೋಜಾದೇವಿ ನಾಪತ್ತೆಯಾಗಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನು ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಸರೋಜಾದೇವಿಯನ್ನು ಕಡೂರು ತಾಲೂಕಿನ ಸಖರಾಯಪಟ್ಟಣದಿಂದ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!