March 20, 2026

ಬೆಳ್ತಂಗಡಿ: ಕೆರೆಗೆ ಹಾರಿ ವೃದ್ಧೆ ಆತ್ಮಹತ್ಯೆ

0
IMG-20221031-WA0006.jpg

ಬೆಳ್ತಂಗಡಿ: ವೃದ್ಧೆಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಅಮ್ಟಂಗೆ ಎಂಬಲ್ಲಿ ನ.1ರಂದು ನಡೆದಿದೆ.

ಮೃತರನ್ನು ಅಮ್ಟಂಗೆ ನಿವಾಸಿ ಜಾನಕಿ ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಜಾನಕಿ ಮನೆಯ ತೋಟದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಎರಡು ಹೆಣ್ಣು ಮಕ್ಕಳನ್ನು ಹಾಗೂ ಒಂದು ಹೆಣ್ಣು ಮಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!