ಅನಧಿಕೃತ ಕಟ್ಟಡ ನಿರ್ಮಿಸಿದ ಆರೋಪ: ಬಿಜೆಪಿ ಸಂಸದ ಗೌತಮ್ ಗಂಭೀರ್ಗೆ ಸಮನ್ಸ್ ಜಾರಿ
ನವದೆಹಲಿ: ಕರ್ಕರ್ಡೂಮಾ ನ್ಯಾಯಾಲಯದ ಬಳಿಯ ಪ್ರಿಯಾ ಎನ್ಕ್ಲೇವ್ನಲ್ಲಿ ಡಂಪಿಂಗ್ ಯಾರ್ಡ್ಗಾಗಿ ಎಂಸಿಡಿ ನಿಗದಿಪಡಿಸಿದ್ದ ಭೂಮಿಯಲ್ಲಿ ಅನಧಿಕೃತವಾಗಿ ಗ್ರಂಥಾಲಯವನ್ನು ನಿರ್ಮಿಸಿದ ಆರೋಪದಡಿ ಬಿಜೆಪಿ ಸಂಸದ ಗೌತಮ್ ಗಂಭೀರ್ಗೆ ದೆಹಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಕರ್ಕರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಿಮಾಂಶು ರಮಣ್ ಸಿಂಗ್ ಅವರು ಸೋಮವಾರ ಗೌತಮ್ ಗಂಭೀರ್ ಅವರಿಗೆ 2022ರ ಡಿಸೆಂಬರ್ 13ಕ್ಕೆ ಈ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.


