ಕಾಸರಗೋಡು: ದೇವಸ್ಥಾನದಿಂದ ದೇವರ ವಿಗ್ರಹದ ಚಿನ್ನಾಭರಣ ಕಳವು ಪ್ರಕರಣ: ಪರಾರಿಯಾಗಿದ್ದ ಅರ್ಚಕನ ಬಂಧನ
ಕಾಸರಗೋಡು: ದೇವಸ್ಥಾನದಿಂದ ದೇವರ ವಿಗ್ರಹದ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಅರ್ಚಕನಾದ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
ತಿರುವನಂತಪುರಕ್ಕೆ ತೆರಳಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ತಿರುವನಂತಪುರ ಮೂಲದ ದೀಪಕ್ ನಂಬೂದಿರಿ ಬಂಧಿತ ಆರೋಪಿ. ಚಿನ್ನಾಭರಣವನ್ನು ಮಾರಾಟ ಮಾಡಿದ್ದು , ಇದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ . ಅಕ್ಟೋಬರ್ 29ರ ಬಳಿಕ ಈ ಕೃತ್ಯ ನಡೆದಿತ್ತು.




