ಪ್ರೀತಿಸಿ ಮಾದುವೆಯಾಗಿದ್ದ ಪತ್ನಿಯನ್ನೇ ಕೊಂದ ಪತಿ
ತುಮಕೂರು: ರಾತ್ರಿ ಮನೆಯಲ್ಲಿದ್ದ ಮಹಿಳೆ ಬೆಳಗ್ಗೆ ಪಕ್ಕದ ತೋಟದಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು ಕೊಲೆಯಾದ ಕೆಲವೇ ಗಂಟೆಗಳಲ್ಲಿ ಸಿಕ್ಕಿಬಿದ್ದಿದ್ದಾನೆ. ಮಾತ್ರವಲ್ಲ ಕೊಲೆಗೆ ಕಾರಣವೇನು ಎಂಬುದು ಕೂಡ ಬಹಿರಂಗಗೊಂಡಿದೆ.
ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದಂಡಿನಶಿವರ ಬಳಿಯ ಕುರುಬರಹಳ್ಳಿಯ ಆಶಾ (29) ಸಾವಿಗೀಡಾದಾಕೆ. ಈಕೆ ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಎಂಬಾತನನ್ನು ಇತ್ತೀಚೆಗಷ್ಟೇ ಮದುವೆಯಾಗಿದ್ದಳು.
ಆದರೆ ರಾತ್ರಿ ಮನೆಯಲ್ಲಿದ್ದ ಆಶಾ, ಬೆಳಗ್ಗೆ ಪಕ್ಕದ ತೋಟದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಳು. ನಿನ್ನೆ ಬೆಳಗ್ಗೆ ಗ್ರಾಮಸ್ಥರು ಶವವನ್ನು ನೋಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.




