ವಿಟ್ಲ: ಪೆಟ್ರೋಲ್ ಸುರಿದು ಯುವಕ ಹತ್ಯೆ ಪ್ರಕರಣ: ಯುವಕ ಸಮಾದ್ನ ಮೃತದೇಹ ಪತ್ತೆ
ವಿಟ್ಲ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಬಂಟ್ವಾಳ-ವಿಟ್ಲ ಠಾಣಾ ವ್ಯಾಪ್ತಿಯ ಗಡಿ ಭಾಗದ ಸುರಿಬೈಲು ನಿವಾಸಿ ಸಪ್ಪಿ (ಸಮಾದ್) (19) ಮೃತ ಯುವಕ.
ಅದ್ರಾಮ ಸಲಿಂಗಕಾಮಿಯಾಗಿದ್ದು, ಮಂಚಿ-ಇರಾ-ಮುಡಿಪು ರಸ್ತೆಯ ನಿರ್ಜನ ಪ್ರದೇಶದ ಗುಡ್ಡದಲ್ಲಿ ಪೆಟ್ರೋಲ್ ಸುರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ.
ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಂಟ್ವಾಳ ಮತ್ತು ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.