ಟಿಪ್ಪು ಪ್ರತಿಮೆ ನಿರ್ಮಿಸಿದರೆ ತಪ್ಪೇನು: ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ‘ಟಿಪ್ಪು ಪ್ರತಿಮೆ ನಿರ್ಮಿಸಲಿ ಬಿಡಿ. ಅದರಲ್ಲಿ ತಪ್ಪೇನಿದೆ?’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
ಮೈಸೂರಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡುವುದಾಗಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರು ಇತಿಹಾಸ ತಿರುಚುವವರು’ ಎಂದರು.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ‘ಟಿಪ್ಪು ಸುಲ್ತಾನ್, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಾಡಿ ಮಲ್ಲಮ್ಮ ಅವರೆಲ್ಲರೂ ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಅವರ ಪ್ರತಿಮೆಗಳ ನಿರ್ಮಿಸುವ ಅಪೇಕ್ಷೆ ಹೊಂದಿದ್ದರೆ ಯಾರೂ ವಿರೋಧಿಸಬಾರದು’ ಎಂದರು.




