ಶ್ರದ್ಧಾ ವಾಕರ್ ಕೊಲೆ ಪ್ರಕರಣ: ವೀಡಿಯೋ ಕಾನ್ಫೆರೆನ್ಸ್ ಮೂಲಕ ಆರೋಪಿ ಅಫ್ತಾಬ್ ಹಾಜರುಪಡಿಸಲು ಕೋರ್ಟ್ ಅನುಮತಿ
ನವೆದಹಲಿ: ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅನ್ನು ಕೋರ್ಟ್ ಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರುಪಡಿಸೋದಕ್ಕೆ ದೆಹಲಿ ಪೊಲೀಸರ ಅರ್ಜಿಗೆ ಕೋರ್ಟ್ ಅನುಮತಿ ನೀಡಿದೆ.
ಈ ಪ್ರಕರಣದ ಭದ್ರತೆ ಮತ್ತು ಸೂಕ್ಷ್ಮತೆಯಿಂದಾಗಿ ಆರೋಪಿ ಅಫ್ತಾಬ್ ಪೂನಾವಾಲಾ ಅವನನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಯಿತು.
ಅಫ್ತಾಬ್ ಪೂನಾವಾಲಾನನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಇಂದು 4 ಗಂಟೆಗೆ ಪೊಲೀಸರು ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.





