ಟಿಪ್ಪು ಸುಲ್ತಾನ್ ಪ್ರತಿಮೆ ಬೇಡ ಎಂದ ಸಿಎಂ ಇಬ್ರಾಹಿಂ ವಿರುದ್ಧ ನಟ ಚೇತನ್ ಆಕ್ರೋಶ
ಬೆಂಗಳೂರು: ಸ್ಯಾಂಡಲ್ವುಡ್ನ ಆ ದಿನಗಳು’ ಖ್ಯಾತಿಯ ನಟ ಚೇತನ್ ಕುಮಾರ್ ಸದಾ ಒಂದಲ್ಲಾ ಒಂದು ವಿವಾದದ ಮೂಲಕ ಸುದ್ದಿಯಾಗಲೇ ಇರುತ್ತಾರೆ. `ಕಾಂತಾರ’ ಚಿತ್ರದ ವಿರುದ್ಧ ಕಿಡಿಕಾರಿದ ನಂತರ ಜೆಡಿಎಸ್ ರಾಜಕಾರಣಿ ಸಿಎಂ ಇಬ್ರಾಹಿಂ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ರಾಜಕಾರಣಿ ಸಿಎಂ ಇಬ್ರಾಹಿಂ ಟಿಪ್ಪು ಸುಲ್ತಾನ್ ಪ್ರತಿಮೆ ಬೇಡ ಪ್ರತಿಮೆ ಸ್ಥಾಪಿಸುವುದನ್ನು ಇಸ್ಲಾಂ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಇದು ಅವರ ಅವಿವೇಕ ಮತ್ತು ಮೂರ್ಖತನದ ಹೇಳಿಕೆಯಾಗಿದೆ ಎಂದು ಚೇತನ್ ಕಿಡಿಕಾರಿದ್ದಾರೆ.




