ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ: 18 ಮಂದಿ ಶಬರಿ ಮಾಲಾಧಾರಿಗಳಿಗೆ ಗಾಯ
ಕೇರಳ : ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಆಂಧ್ರಪ್ರದೇಶದ ಬಸ್ ಶನಿವಾರ ಕೇರಳದ ಪಥನಂತಿಟ್ಟ ಬಳಿ ಪಲ್ಟಿಯಾದ ಪರಿಣಾಮ ಕನಿಷ್ಠ 18 ಮಂದಿ ಗಾಯಗೊಂಡಿದ್ದಾರೆ.
ಆಂಧ್ರದಿಂದ ಶಬರಿಮಲೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು. ಹದಿನೆಂಟು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಎಲ್ಲ ಜನರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.


