ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಬಸ್ ನಲ್ಲಿ ಅನ್ಯಕೋಮಿನ ಯುವಕನಿಂದ ಯುವತಿಯೊಂದಿಗೆ ಅಸಭ್ಯ ವರ್ತನೆ:
ಯುವಕನಿಗೆ ಪೊಲೀಸರಿಂದ ಎಚ್ಚರಿಕೆ
ಉಪ್ಪಿನಂಗಡಿ: ಅನ್ಯಕೋಮಿನ ಯುವಕನೋರ್ವ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಹಾಸನದಿಂದ ಮಂಗಳೂರಿಗೆ ತೆರಳುವ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ನಡೆದಿದೆ.
ಹಾಸನದಿಂದ ಮಂಗಳೂರಿಗೆ ತೆರಳುವ ಬಸ್ ನಲ್ಲಿ ಪೆರ್ನೆ ಮೂಲದ ಅನ್ಯಕೋಮಿನ ಯುವಕನೋರ್ವ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಈ ಸಂದರ್ಭದಲ್ಲಿ ಯುವತಿ ಜೋರಾಗಿ ಬೊಬ್ಬೆ ಹೊಡೆದಿದ್ದು, ಈ ವೇಳೆ ಬಸ್ ನಲ್ಲಿದ್ದವರು ಯುವಕನನ್ನು ಹಿಡಿದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.
ಯುವಕನನ್ನು ವಶಕ್ಕೆ ಪಡೆದ ಪೊಲೀಸರು ಯುವತಿ ಆತನ ವಿರುದ್ಧ ಠಾಣೆಗೆ ದೂರು ನೀಡದ ಹಿನ್ನೆಲೆ ವಿಚಾರಣೆ ನಡೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.