February 3, 2026

ಮಂಗಳೂರು: ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಭೇಟಿ, ಪರಿಶೀಲನೆ

0
image_editor_output_image614484766-1669184577654.jpg

ಮಂಗಳೂರು: ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ಸ್ಫೋಟದ ಬಗ್ಗೆ ಹಾಗೂ ನಂತರದ ತನಿಖೆಯ ಬೆಳವಣಿಗೆಗಳ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರೇಟ್ ನ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸ್ಫೋಟದಿಂದ ಗಾಯಗೊಂಡಿರುವ ಆರೋಪಿ ಮಹಮ್ಮದ್ ಶಾರಿಕ್ ಹಾಗೂ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಕೂಡ ಗೃಹ ಸಚಿವರು ಭೇಟಿಯಾದರು.

ಈ ಭಯೋತ್ಪಾದನಾ ಕೃತ್ಯದ ಬಗ್ಗೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಗೃಹ ಸಚಿವರು ಸಭೆ ನಡೆಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!