ಮರಾಠಿ ಸಾಂಗ್ ಹಾಕದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ
ಮುಂಬೈ: ಮರಾಠಿ ಸಾಂಗ್ ಹಾಕಲಿಲ್ಲ ಎಂಬ ಕಾರಣಕ್ಕೆ ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಕಾರ್ಯಕರ್ತರು ಮುಂಬೈ ಸಮೀಪದ ವಾಶಿಯಲ್ಲಿರುವ ಹೋಟೆಲ್ನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.
ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಮರಾಠಿ ಹಾಡು ಹಾಕುವ ವಿಚಾರವಾಗಿ ಎಂಎನ್ಎಸ್ ಕಾರ್ಯಕರ್ತರು ಮತ್ತು ಹೋಟೆಲ್ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ.
ಸಿಬ್ಬಂದಿ ಮತ್ತು ವ್ಯವಸ್ಥಾಪಕರು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸಿದರು, ಆದರೆ ಗಲಾಟೆ ಹೆಚ್ಚಾಗಿ ಹಿಂಸಾತ್ಮಕಕ್ಕೆ ತಿರುಗಿತು.
ಈ ಘಟನೆಯ ವೀಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.




