February 3, 2026

ಭಾರತ್ ಜೋಡೋ ಯಾತ್ರೆಯಲ್ಲಿ ಬಿದ್ದು ಕೈ ಮುರಿದುಕೊಂಡ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ 

0
image_editor_output_image-1181981787-1669610559988.jpg

ಭೋಪಾಲ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭಾರತ್ ಜೋಡೋ ಯಾತ್ರೆಯಲ್ಲಿ ಬಿದ್ದು ಕೈ ಮುರಿದುಕೊಂಡಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ವೇಣುಗೋಪಾಲ್‍ರನ್ನು ತಳ್ಳಿಕೊಂಡು ಅಭಿಮಾನಿಗಳು ನುಗ್ಗಿದ್ದಾರೆ.

ಈ ವೇಳೆ ಬಿದ್ದ ವೇಣುಗೋಪಾಲ್ ಮೊಣಕಾಲು ಮತ್ತು ಕೈಗೆ ಗಾಯ ಮಾಡಿಕೊಂಡಿದ್ದಾರೆ. ಬಳಿಕ ವೈದ್ಯರು ಪರೀಕ್ಷಿಸಿದಾಗ ಕೈ ಮೂಳೆ ಫ್ಯಾಕ್ಚರ್ ಆಗಿರುವ ಬಗ್ಗೆ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!