March 21, 2026

ಮದುವೆಯಾಗಲು ಒಪ್ಪಲಿಲ್ಲವೆಂಬ ಕಾರಣಕ್ಕೆ ಮಹಿಳೆಗೆ ಚಾಕುವಿನಿಂದ ಇರಿತ

0
Screenshot_2022-11-28-10-27-20-22_680d03679600f7af0b4c700c6b270fe7.jpg

ಬೆಂಗಳೂರು: ಮದುವೆಯಾಗಲು ಒಪ್ಪಲಿಲ್ಲವೆಂಬ ಕಾರಣಕ್ಕೆ ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಲಾಗಿದ್ದು, ಈ ಸಂಬಂಧ ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಚಾಕು ಇರಿತದಿಂದ ತೀವ್ರ ಗಾಯಗೊಂಡಿರುವ 23 ವರ್ಷದ ಮಹಿಳೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೃತ್ಯ ಎಸಗಿರುವ ಆಟೊ ಚಾಲಕ ಪರಾರಿಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ವಿವಾಹಿತ ಮಹಿಳೆ, ಪತಿ ಜೊತೆ ನೆಲೆಸಿದ್ದರು. ಅವರನ್ನು ಪರಿಚಯ ಮಾಡಿಕೊಂಡಿದ್ದ ಆಟೊ ಚಾಲಕ, ಸ್ನೇಹ ಬೆಳೆಸಿದ್ದ. ನಂತರ, ಇಬ್ಬರ ಮಧ್ಯೆ ಸಲುಗೆ ಬೆಳೆದಿತ್ತು. ಇಬ್ಬರೂ ಹಲವೆಡೆ ಸುತ್ತಾಡಿದ್ದರು.’

‘ಆಟೊ ಚಾಲಕ ಸಹ ವಿವಾಹಿತನಾಗಿದ್ದ. ಮೊದಲ ಪತ್ನಿಯನ್ನು ತೊರೆದು ಎರಡನೇ ಮದುವೆಯಾಗಲು ತೀರ್ಮಾನಿಸಿದ್ದ ಚಾಲಕ, ಸಲುಗೆ ಇಟ್ಟುಕೊಂಡಿದ್ದ ಮಹಿಳೆಗೆ ವಿಷಯ ತಿಳಿಸಿದ್ದ. ತನ್ನನ್ನು ಎರಡನೇ ಮದುವೆಯಾಗುವಂತೆ ಒತ್ತಾಯಿಸಿದ್ದ. ಆದರೆ, ಮಹಿಳೆ ಒಪ್ಪಿರಲಿಲ್ಲ. ಇದೇ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿತ್ತು’ ಎಂದು ಪೊಲೀಸರು ತಿಳಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!