March 20, 2026

ಪತ್ನಿ ಸಹಿತ ದೃಶ್ಯ ಮಾಧ್ಯಮದ ಯುವ ಪತ್ರಕರ್ತ ಆತ್ಮಹತ್ಯೆ

0
Screenshot_2022-11-28-10-41-58-49_680d03679600f7af0b4c700c6b270fe7.jpg

ಮುದ್ದೇಬಿಹಾಳ: ಪಟ್ಟಣದ ಎಪಿಎಂಸಿ ಪಕ್ಕದ ಮುರಾಳ ಅವರ ಕಟ್ಟಡದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ದೃಶ್ಯ ಮಾಧ್ಯಮದ ಯುವ ಪತ್ರಕರ್ತ ತಿಪ್ಪಣ್ಣ ಸಿದ್ದಪ್ಪ ಹೊಸಮನಿ (34) ಮತ್ತು ಆತನ ಪತ್ನಿ ಸುಜಾತಾ (30) ಅಕ್ಕಪಕ್ಕದ ಕೋಣೆಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ರಾತ್ರಿ 10-30 ಗಂಟೆಯ ಸುಮಾರು ಬೆಳಕಿಗೆ ಬಂದಿದೆ.
ತಿಪ್ಪಣ್ಣನು ಸುದ್ದಿ ವಾಹಿನಿಯೊಂದರಲ್ಲಿ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಕೊಣ್ಣೂರು ಗ್ರಾಮದ ತಿಪ್ಪಣ್ಣ ಕಳೆದ 4-5 ತಿಂಗಳ ಹಿಂದಷ್ಟೇ ಹಡಲಗೇರಿ ಹತ್ತಿರ ಇರುವ ಶ್ರೀ ಪದ್ಮಾವತಿ ದೇವಸ್ಥಾನದಲ್ಲಿ ತನ್ನದೇ ಸಮುದಾಯದ ಕೆಸಾಪೂರ ಗ್ರಾಮದ ಪ್ರೀತಿಸಿದ ಯುವತಿಯೊಂದಿಗೆ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದ. ಗಂಡ, ಹೆಂಡತಿ ಇಬ್ಬರೂ ಇಲ್ಲೇ ಮನೆ ಮಾಡಿಕೊಂಡು ವಾಸಿಸುತ್ತಿದ್ದರು

Leave a Reply

Your email address will not be published. Required fields are marked *

error: Content is protected !!