December 19, 2025

ಮಂಗಳೂರು: ಖಾಸಗಿ ಬಸ್ ಗೆ ದುಷ್ಕರ್ಮಿಗಳಿಂದ ಕಲ್ಲೆಸೆತ:
ಡಿಯೋ ದ್ವಿಚಕ್ರ ವಾಹನದಲ್ಲಿ ಬಂದ ಮುಸುಕುಧಾರಿಗಳಿಂದ ಕೃತ್ಯ

0
image_editor_output_image-1664978831-1636804580694

ಮಂಗಳೂರು: ನಗರ ಕೊಟ್ಟಾರ ಚೌಕಿ ಸಮೀಪದ ಕರಾವಳಿ ಕಾಲೇಜು ಬಳಿ ಖಾಸಗಿ ಸಿಟಿ ಬಸ್ಸೊಂದಕ್ಕೆ ದುಷ್ಕರ್ಮಿಗಳು ಕಲ್ಲೆಸೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಮಂಗಳೂರು ನಗರದಿಂದ ಕಾಟಿಪಳ್ಳ ಕೈಕಂಬ-ಮಂಗಳಾದೇವಿ ಮಧ್ಯೆ ಚಲಿಸುವ ರೂಟ್ ನಂಬ್ರ 15 ಬಸ್ಸು ಕೊಟ್ಟಾರ ಚೌಕಿ ಬಳಿ ಜನರನ್ನು ಹತ್ತಿಸಲು ನಿಲ್ಲಿಸಲಾಗಿತ್ತು.

ಈ ವೇಳೆ ಕಪ್ಪು ಬಣ್ಣದ ಡಿಯೋ ದ್ವಿಚಕ್ರ ವಾಹನದಲ್ಲಿ ಮುಸುಕುಧಾರಿಗಳು ಬಂದು ಕಲ್ಲೆಸೆದು ಪರಾರಿಯಾಗಿದ್ದಾರೆ. ತಕ್ಷಣವೇ ದ್ವಿಚಕ್ರ ವಾಹನವನ್ನು ಬೆನ್ನಟ್ಟಿ ಹೋದರೂ ಪರಾರಿಯಾಗಿದ್ದಾರೆ. ದ್ವಿಚಕ್ರ ವಾಹನದ ನಂಬರ್‌ ಪ್ಲೇಟ್‌ ಸಹ ಮಣ್ಣು ಹಿಡಿದಿತ್ತು. ಇದರಿಂದ ಯಾರೆಂದು ಗುರುತಿಸಲು ಸಾಧ್ಯವಾಗಿಲ್ಲ ಎಂದು ಬಸ್‌ ಚಾಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!