March 21, 2026

ಕಸದ ಲಾರಿ ಢಿಕ್ಕಿ: ಇಬ್ಬರು ಬೈಕ್ ಸವಾರರು ಸಾವು

0
image_editor_output_image-772355995-1669695727739.jpg

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ನಡೆದಿದೆ.

ತ್ಯಾಜ್ಯ ಸುರಿಯಲು ಹೋಗ್ತಿದ್ದ ವೇಳೆ ಬೈಕ್‍ಗೆ ಬಿಬಿಎಂಪಿ ಲಾರಿ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಪರಾರಿ ಆಗಲು ಯತ್ನಿಸಿದ ಚಾಲಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದರು.

ನಂತರ ಕಸದ ಲಾರಿಗಳ ವಿರುದ್ಧ ಸ್ಥಳೀಯ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿ, ರಸ್ತೆಯಲ್ಲಿ ಇರುವ ಮೃತದೇಹಗಳನ್ನು ಎತ್ತಲು ಬಿಡದೆ ಪ್ರತಿಭಟನೆ ನಡೆಸಿದರು.

Leave a Reply

Your email address will not be published. Required fields are marked *

You may have missed

error: Content is protected !!