ಮಂಗಳೂರು: ಆಟೋ ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಶಾರೀಕ್ ಆರೋಗ್ಯದಲ್ಲಿ ಕೊಂಚ ಚೇತರಿಕೆ: ಆಸ್ಪತ್ರೆಯಲ್ಲಿ ಪೊಲೀಸರಿಂದ ಬಿಗಿ ಭದ್ರತೆ
ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ ಎಂದು ತಿಳಿದು ಬಂದಿದೆ.
ಶಾರೀಕ್ ನ ಶ್ವಾಸಕೋಶದೊಳಗೆ ಹೊಗೆ ತುಂಬಿದ್ದರಿಂದ ಆರೋಗ್ಯ ಹದಗೆಟ್ಟಿತ್ತು. ಆತನ ಕಣ್ಣಿಗೂ ಹಾನಿಯಾಗಿತ್ತು. ಇದೀಗ ಚಿಕಿತ್ಸೆಯಲ್ಲಿ ತುಸು ಚೇತರಿಸಿಕೊಂಡಿದ್ದು, ತನಿಖಾಧಿಕಾರಿಗಳು ತನಿಖೆಗೆ ಸಿದ್ಧತೆ ನಡೆಸಿದ್ದಾರೆ.
ಇನ್ನು ಆತನಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಒಳಗೂ ಮತ್ತು ಹೊರಗೂ ಬಿಗಿ ಭದ್ರತೆ ಒದಗಿಸಲಾಗಿದೆ.





