ಬಿಜೆಪಿ ಅಭ್ಯರ್ಥಿಯ ಮೇಲೆ ದುಷ್ಕರ್ಮಿಗಳಿಂದ ದಾಳಿ
ವನಸ್ಡಾ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಯೂಷ್ ಪಟೇಲ್ ಕಳೆದ ರಾತ್ರಿ ಪ್ರತಾಪನಗರದಿಂದ ವಂಡರ್ವೇಲಾ ಕಡೆಗೆ ತೆರಳುತ್ತಿದ್ದಾಗ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿದೆ ಎಂದು ವರದಿಗಳು ತಿಳಿಸಿವೆ.
ದುಷ್ಕರ್ಮಿಗಳು ಪಿಯೂಷ್ ಪಟೇಲ್ ಅವರ ಕಾರಿನ ಗಾಜು ಒಡೆದು ಹಾಕಿದ್ದು, ದಾಳಿಯಿಂದಾಗಿ ಪಟೇಲ್ ಅವರ ತಲೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.




