December 20, 2025

ಪುತ್ತೂರು: ತಮ್ಮನನ್ನು ಕೊಲೆಗೈದ ಅಣ್ಣ

0
image_editor_output_image537096764-1669971580971.jpg

ಪುತ್ತೂರು: ಕುಡಿದ ಮತ್ತಿನಲ್ಲಿ ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ನಡೆದಿದೆ.

ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರು ನವರಾದ ನಿಂಗನ ಗೌಡ, ಒಡಹುಟ್ಟಿದ ತಮ್ಮನಾದ ಮಾದೇವಪ್ಪ ನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ ಗೌಡನು, ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಪುತ್ತೂರು ನಗರ ಠಾಣಾ ಅ.ಕ್ರ. 97/2022 ಕಲಂ 302 IPC ರ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಆರೋಪಿ ನಿಂಗನ ಗೌಡ ಪರಾರಿಯಾಗಿದ್ದು, ಆರೋಪಿಯ ಪತ್ತೆಗೆ ಸಹಕರಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಎಲ್ಲಾದರು ಕಂಡು ಬಂದಲ್ಲಿ ಪುತ್ತೂರು ನಗರ ಠಾಣೆಗೆ 08251-230555, 9480805361, 8147664989 ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ..

Leave a Reply

Your email address will not be published. Required fields are marked *

You may have missed

error: Content is protected !!