September 19, 2024

ಸುಣ್ಣದ ಕಲ್ಲಿನ ಗಣಿ ಕುಸಿತ: ಏಳು ಮಂದಿ ಕೂಲಿ ಕಾರ್ಮಿಕರು ಮೃತ್ಯು

0

ಛತ್ತೀಸ್‌ಘಡ: ಗಣಿಯಲ್ಲಿ ಸುಣ್ಣದ ಕಲ್ಲು ತೆಗೆಯುವ ವೇಳೆ ಸಂಭವಿಸಿದ ದುರಂತದಲ್ಲಿ ಏಳು ಮಂದಿ ಕೂಲಿ ಕಾರ್ಮಿಕರು ಮೃತಪಟ್ಟ ಘಟನೆ ಛತ್ತೀಸ್‌ಘಡದ ಬಸ್ತಾರ್‍ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ಮಂದಿ ಮಣ್ಣಿನೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ಪರಿಹಾರ ಕಾರ್ಯದಲ್ಲಿ ತೊಡಗಿವೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!