September 20, 2024

ಚಿಕ್ಕಮಗಳೂರಿನಲ್ಲಿ ದತ್ತಜಯಂತಿ: ಮುಳ್ಳಯ್ಯನಗಿರಿ ಭಾಗದ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ

0

ಚಿಕ್ಕಮಗಳೂರು: ಡಿ. 6,7,8 ರಂದು ತಾಲೂಕಿನ ದತ್ತಪೀಠದಲ್ಲಿ ನಡೆಯುವ ದತ್ತಜಯಂತಿ ಹಿನ್ನೆಲೆ ಡಿಸೆಂಬರ್ 5ರ ಬೆಳಗ್ಗೆ 6 ಗಂಟೆಯಿಂದ ಡಿ.9ರ ಬೆಳಗ್ಗೆ 10 ಗಂಟೆಯವರೆ ಮುಳ್ಳಯ್ಯನಗಿರಿ ಭಾಗದ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ (DC) ಕೆ.ಎನ್ ರಮೇಶ್ ತಿಳಿಸಿದ್ದಾರೆ.

ಡಿಸೆಂಬರ್ 6 ರಿಂದ ಮೂರು ದಿನಗಳ ಕಾಲ ನಡೆಯಲಿರುವ ದತ್ತಜಯಂತಿ ಹಿನ್ನೆಲೆ ಜಿಲ್ಲಾದ್ಯಂತ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಭಕ್ತಾಧಿಗಳ ಅನುಕೂಲಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯಿಂದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸುಗಮ ಸಂಚಾರ ದೃಷ್ಟಿಯಿಂದ ರಸ್ತೆ ದುರಸ್ಥಿ ಕಾರ್ಯವೂ ಪೂರ್ಣಗೊಂಡಿದೆ. ತಾತ್ಕಾಲಿಕ ಆರೋಗ್ಯ ಸೌಲಭವನ್ನು ಒದಗಿಸಲು 3 ದಿನದ ಮಟ್ಟಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗುವುದು. ಹೊನ್ನಮ್ಮನ ಹಳ್ಳದಲ್ಲಿ ಭಕ್ತರು ಸ್ನಾನ ಮಾಡಲು ಮೆಟ್ಟಿಲು, ಕಟ್ಟೆ ನಿರ್ಮಾಣ ಮಾಡಲಾಗಿದೆ.

ದತ್ತ ಜಯಂತಿ ಮುಗಿಯುವವರೆಗೂ ನಿರಂತರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!