March 20, 2026

ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ಶಿಕ್ಷಕ ಅಮಾನತು

0
IMG-20221204-WA0012.jpg

ಮಧ್ಯಪ್ರದೇಶ: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಕ್ಕಾಗಿ ಮಧ್ಯಪ್ರದೇಶದ ಬರ್ವಾನಿಯಲ್ಲಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕನಸ್ಯ ಜಿಲ್ಲೆಯ ಬುಡಕಟ್ಟು ವ್ಯವಹಾರಗಳ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ರಾಜೇಶ್ ಕನ್ನೋಜೆ ಅವರನ್ನು ನವೆಂಬರ್ 25 ರಂದು ಅಮಾನತುಗೊಳಿಸಲಾದ್ದು, ಅವರ ಅಮಾನತು ಆದೇಶವು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ವಿಷಯ ಬೆಳಕಿಗೆ ಬಂದಿದೆ.

ಇನ್ನು ಬುಡಕಟ್ಟು ವ್ಯವಹಾರಗಳ ಇಲಾಖೆಯ ಸಹಾಯಕ ಆಯುಕ್ತ ಎನ್.ಎಸ್.ರಘುವಂಶಿ ಅವರ ಆದೇಶದಂತೆ ಕನ್ನೋಜೆ ಅವರನ್ನು ವೃತ್ತಿಪರ ನಡವಳಿಕೆಯನ್ನು ನಿಯಂತ್ರಿಸುವ ನಿಯಮಾವಳಿಗಳನ್ನು ಉಲ್ಲಂಘಿಸಿ ಮತ್ತು ರಾಜಕೀಯ ಸಭೆಗೆ ಹೋಗಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!