ಗುರುಪುರ: ಟಿಪ್ಪರ್ ಮತ್ತು ಲಾರಿ ನಡುವೆ ಅಪಘಾತ – ಇಬ್ಬರು ದುರ್ಮರಣ
ಮಂಗಳೂರು: ಗುರುಪುರದಲ್ಲಿ ಟಿಪ್ಪರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತವೊಂದರಲ್ಲಿ ಇಬ್ಬರು ದುರಂತ ಸಾವನ್ನಪ್ಪಿದ ಘಟನೆ ನಡೆದಿದೆ.
ವಾಮಂಜೂರಿನಿಂದ ಗುರುಪುರ ಕಡೆ ತೆರಳುತ್ತಿದ್ದ ಲಾರಿ ಕೈಕಂಬ ಕಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಬ್ರೇಕ್ ಫೈಲ್ ಆಗಿ ಇಳಿಜಾರು ಪ್ರದೇಶವಾದ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಬಾರದೆ ಲಾರಿ ಡಿಕ್ಕಿಯಾಗಿದ್ದು, ಸವಾವರಿಬ್ಬರ ದಾರುಣ ಸಾವನ್ನಪ್ಪಿದ್ದಾರೆ.
ಮುಂಜಾನೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದು, ಈ ಭಾಗದಲ್ಲಿ ಈ ಹಿಂದೆ ಇದೇ ರೀತಿ ಆರಕ್ಕೂ ಅಧಿಕ ಘಟನೆ ನಡೆದಿವೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.




