ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ
ಕೋಲಾರ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದನೆಂದು ಪ್ರಿಯಕರನಿಂದಲೇ ಪತಿಯನ್ನ ಕೊಲೆ ಮಾಡಿಸಿರುವ ಘಟನೆ ನಡೆದಿದ್ದು, ಪತ್ನಿ ಹಾಗೂ ಪ್ರಿಯಕರನನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಂದಗುಡಿ ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಚಂಬೆ ಗ್ರಾಮದ ಆನಂದ್ ಕೊಲೆಯಾದ ವ್ಯಕ್ತಿ. ಆನಂದ್ ಕಳೆದ ನವೆಂಬರ್ 21 ರಂದು ಕಾಣೆಯಾಗಿದ್ದರು. ಈ ಸಂಬಂಧ ಕೋಲಾರದ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಾಗಿತ್ತು.