ಆರೆಸ್ಸೆಸ್ ಕಾರ್ಯಕರ್ತರಿಗೆ ಬೆದರಿಕೆ: ಸರ್ಕಲ್ ಇನ್ಸ್ಪೆಕ್ಟರ್ ಸೇರಿ 7 ಮಂದಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲು
ಮಂಡ್ಯ: ಆರೆಸ್ಸೆಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಸರ್ಕಲ್ ಇನ್ಸ್ಪೆಕ್ಟರ್ ಸೇರಿದಂತೆ 7 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯ ಹೋರಾಟ ಇದೀಗ ಮತ್ತೊಂದು ಆಯಾಮವನ್ನು ಪಡೆದುಕೊಂಡಿದೆ. ಇದುವರೆಗೆ ಜಾಮಿಯಾ ಮಸೀದಿ ವಿರುದ್ಧ ಹೋರಾಟ ನಡೆಸುತ್ತಿದ್ದ ಹಿಂದೂ ಕಾರ್ಯಕರ್ತರು ಇದೀಗ ಪೊಲೀಸರ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ.




