ಕೊಲೆ ಪ್ರಕರಣದ ಆರೋಪಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಆತ್ಮಹತ್ಯೆ
ಉಡುಪಿ: ಒತ್ತಿನೆಣೆ ಸಮೀಪದ ಹೇನಬೇರು ರಸ್ತೆಯಲ್ಲಿ ಕಾರು ಸಹಿತ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆ ಮಾಡಿದ್ದಾರೆ.
ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಶೇರಿಗಾರ್(52) ಎಂಬಾತ ರವಿವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಹಿರಿಯಡ್ಕ ಅಂಜಾರಿನಲ್ಲಿರುವ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ವಿಚಾರಣಾಧೀನ ಕೈದಿಯಾಗಿರುವ ಈತ, ಜೈಲಿನ 20 ಮಂದಿ ಕೈದಿಗಳಿದ್ದ ಕೊಠಡಿಯಲ್ಲಿಯೇ ಪಂಚೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.




