ಮಂಗಳೂರು | ಚಿನ್ನದ ಮಳಿಗೆಗೆ ನುಗ್ಗಿ ಅನೈತಿಕ ಪೊಲೀಸ್ ಗಿರಿ: ನಾಲ್ವರು ಬಜರಂಗದಳ ಕಾರ್ಯಕರ್ತರ ಬಂಧನ
ಪಡೀಲ್: ಮಂಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಡಿ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎನ್ನಲಾಗಿದೆ.
ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಕೆಲಸಕ್ಕಿದ್ದ ಹಿಂದೂ ಯುವತಿಯ ಸ್ನೇಹ ಗಿಟ್ಟಿಸಿಕೊಂಡಿದ್ದಾಗಿ ಲುಕ್ಮಾನ್ ಮೇಲೆ ಆರೋಪ ಹೊರೆಸಿ ಹಲ್ಲೆ ನಡೆಸಿದ್ದಾಗಿ ದೂರು ದಾಖಲಾಗಿತ್ತು.
ಇನ್ನು ಈ ಬಗ್ಗೆ ಯುವತಿಯ ಮನೆಯವರು, ಸೇಲ್ಸ್ ಎಕ್ಸಿಕ್ಯೂಟಿವ್ ಲುಕ್ಮಾನ್, ಸೇಲ್ಸ್ ಆಫೀಸರ್ ಫೈಝಲ್ ದೂರು ನೀಡಿದ್ದರು.
ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಡಿ ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎಂಬವರನ್ನು ಬಂಧಿಸಿದ್ದಾರೆ.




