March 20, 2026

ಬೆಳ್ತಂಗಡಿಯ ಅಣಿಯೂರು ಪೇಟೆಯಲ್ಲಿ ಕಾಣಿಸಿಕೊಂಡ ಕಾಡಾನೆ: ಜನರಲ್ಲಿ ಆತಂಕ

0
Screenshot_2022-12-12-09-43-13-45_680d03679600f7af0b4c700c6b270fe7.jpg

ಬೆಳ್ತಂಗಡಿ: ತಾಲೂಕಿನ ಅಣಿಯೂರು ಪೇಟೆಯಲ್ಲಿ ಸೋಮವಾರ ಬೆಳಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದೆ.

ಈ ಪ್ರದೆಶದಲ್ಲಿ ಕಳೆದ ಕೆಲವು ಸಮಯದಿಂದ ಒಂಟಿ ಸಲಗವೊಂದು ರಾತ್ರಿ ವೇಳೆ ಕೃಷಿ ನಾಶ ಮಾಡುತ್ತಿತ್ತು. ಇದೀಗ ಹಗಲು ಹೊತ್ತಿನಲ್ಲಿಯೇ ಪೇಟೆ ಬದಿಯಲ್ಲಿ ಕಾಡಾನೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯ ಮೂಡಿಸಲು ಕಾರಣವಾಗಿದೆ.

ನದಿಯಲ್ಲಿ ಕಾಡಾನೆ ತಿರುಗಾಡುತ್ತಿದ್ದು, ನದಿ ಬದಿಯ ತೋಟಗಳಿಗೆ ಹಾನಿಯುಂಟು ಮಾಡುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಜನರಲ್ಲಿ ಆತಂಕ ಮೂಡಿಸಿದೆ.

Leave a Reply

Your email address will not be published. Required fields are marked *

error: Content is protected !!